bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 14
Proverbs 14
Kannada Bible (KNCL) BSI 2016
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 15 →
1
ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.
2
ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.
3
ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.
4
ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ.
5
ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.
6
ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.
7
ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.
8
ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.
9
ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.
10
ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.
11
ದುಷ್ಟರ ಮನೆಮಠ ನಿರ್ಮೂಲವಾಗುವುದು; ಸಜ್ಜನರ ಗುಡಾರ ಉದ್ಧಾರವಾಗುವುದು.
12
ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.
13
ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು.
14
ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.
15
ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.
16
ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.
17
ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.
18
ದಡ್ಡರ ಸೊತ್ತು ಮೂಢತನ; ಜಾಣರಿಗೆ ಜ್ಞಾನವೆ ಭೂಷಣ.
19
ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.
20
ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.
21
ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.
22
ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.
23
ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.
24
ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.
25
ಸತ್ಯವಾಡುವವನ ಸಾಕ್ಷಿ ಪ್ರಾಣಕ್ಕೆ ರಕ್ಷಣೆ; ಸುಳ್ಳಾಡುವವನ ಮಾತು ಬರೀ ವಂಚನೆ.
26
ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.
27
ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.
28
ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.
29
ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.
30
ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.
31
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.
32
ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.
33
ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.
34
ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.
35
ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31