bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 15
Proverbs 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
1
ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.
2
ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.
3
ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.
4
ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.
5
ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.
6
ನೀತಿವಂತನ ಮನೆಯೊಳು ನಿಧಿನಿಕ್ಷೇಪ; ಅನೀತಿವಂತನ ಆದಾಯ ದುಃಖತಾಪ.
7
ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.
8
ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.
9
ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.
10
ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.
11
ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?
12
ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.
13
ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.
14
ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.
15
ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.
16
ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.
17
ದ್ವೇಷವಿರುವಲ್ಲಿ ಕೊಬ್ಬಿದ ಮಾಂಸಭೋಜನಕ್ಕಿಂತ, ಪ್ರೀತಿಯಿರುವಲ್ಲಿ ಸೊಪ್ಪಿನ ಊಟವೇ ಲೇಸು.
18
ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.
19
ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.
20
ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.
21
ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.
22
ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.
23
ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.
24
ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.
25
ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.
26
ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.
27
ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.
28
ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.
29
ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.
30
ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.
31
ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.
32
ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.
33
ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31