bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 16
Proverbs 16
Kannada Bible (KNCL) BSI 2016
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 17 →
1
ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.
2
ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.
3
ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.
4
ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.
5
ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.
6
ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.
7
ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.
8
ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.
9
ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.
10
ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ.
11
ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.
12
ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.
13
ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.
14
ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.
15
ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.
16
ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.
17
ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.
18
ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.
19
ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.
20
ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.
21
ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.
22
ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.
23
ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.
24
ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.
25
ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.
26
ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.
27
ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.
28
ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.
29
ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.
30
ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.
31
ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.
32
ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.
33
ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31