bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 17
Proverbs 17
Kannada Bible (KNCL) BSI 2016
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 18 →
1
ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.
2
ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.
3
ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.
4
ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.
5
ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.
6
ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.
7
ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು.
8
ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!
9
ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.
10
ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.
11
ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.
12
ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.
13
ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.
14
ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.
15
ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.
16
ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!
17
ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.
18
ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ.
19
ಕಲಹಪ್ರಿಯನು ಪಾಪಪ್ರಿಯನು; ಕದವನ್ನು ಎತ್ತರಿಸಿದವನು ಕೇಡನ್ನು ಬರಮಾಡಿಕೊಳ್ಳುವನು.
20
ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.
21
ಹೆಡ್ಡನನ್ನು ಹೆತ್ತವನಿಗೆ ವ್ಯಥೆ; ಮೂರ್ಖನ ತಂದೆಗೆ ಕಡುಚಿಂತೆ.
22
ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.
23
ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.
24
ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.
25
ಬುದ್ಧಿಹೀನನಾದ ಮಗನು ತಂದೆಗೆ ಕಿರಿಕಿರಿ; ಹೆತ್ತತಾಯಿಗೆ ಅವನು ಕರಕರೆ.
26
ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.
27
ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.
28
ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31