bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 19
Proverbs 19
Kannada Bible (KNCL) BSI 2016
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 20 →
1
ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.
2
ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.
3
ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.
4
ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.
5
ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.
6
ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.
7
ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.
8
ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.
9
ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.
10
ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.
11
ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.
12
ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.
13
ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.
14
ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.
15
ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.
16
ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.
17
ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.
18
ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ.
19
ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.
20
ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.
21
ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.
22
ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.
23
ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.
24
ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ.
25
ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.
26
ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು ನಿಂದೆ ಅವಮಾನಗಳಿಗೆ ತುತ್ತಾಗುವನು.
27
ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.
28
ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.
29
ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31