bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 28
Proverbs 28
Kannada Bible (KNCL) BSI 2016
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 29 →
1
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.
2
ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.
3
ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.
4
ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.
5
ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.
6
ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.
7
ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.
8
ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.
9
ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.
10
ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.
11
ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.
12
ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.
13
ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.
14
ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.
15
ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.
16
ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.
17
ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.
18
ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.
19
ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.
20
ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.
21
ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.
22
ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.
23
ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.
24
“ಅದು ತಪ್ಪಲ್ಲ” ಎಂದು ಹೆತ್ತವರ ಆಸ್ತಿಯನ್ನು ಕದಿಯುವವನು ಕೊಳ್ಳೆ ಹೊಡೆಯುವವರ ಸಂಗಡಿಗನು.
25
ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.
26
ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.
27
ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.
28
ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31