bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Proverbs 29
Proverbs 29
Kannada Bible (KNCL) BSI 2016
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 30 →
1
ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.
2
ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.
3
ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.
4
ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.
5
ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.
6
ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.
7
ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.
8
ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.
9
ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು.
10
ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.
11
ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.
12
ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.
13
ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.
14
ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.
15
ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.
16
ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು.
17
ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.
18
ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.
19
ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.
20
ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.
21
ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು.
22
ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.
23
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.
24
ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.
25
ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.
26
ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.
27
ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 30 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31