bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Revelation 12
Revelation 12
Kannada Bible (KNCL) BSI 2016
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 13 →
1
ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.
2
ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು.
3
ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.
4
ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.
5
ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.
6
ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.
7
ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.
8
ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.
9
ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.
10
ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.
11
ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.
12
ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”
13
ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು.
14
ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.
15
ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.
16
ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.
17
ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22