bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Revelation 22
Revelation 22
Kannada Bible (KNCL) BSI 2016
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
1
ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,
2
ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.
3
ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.
4
ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.
5
ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.
6
ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.
7
“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.
8
ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.
9
ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.
10
ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.
11
ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.
12
“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.
13
‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “
14
“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.
15
ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.
16
“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!
17
ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”
18
ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.
19
ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”
20
ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.
21
ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ!
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
All chapters:
1
2
3
4
5
6
7
8
9
10
11
12
13
14
15
16
17
18
19
20
21
22