bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Zechariah 7
Zechariah 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 8 →
1
ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.
2
ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.
3
ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
4
ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು”
5
“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?
6
ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?”
7
“ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”
8
ಅಲ್ಲದೆ ಸರ್ವೇಶ್ವರ ಜೆಕರ್ಯನಿಗೆ ಕೊಟ್ಟ ಸಂದೇಶ ಏನೆಂದರೆ:
9
:ಸತ್ಯಾನುಸಾರ ನ್ಯಾಯತೀರಿಸಿರಿ.
10
ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.
11
“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.
12
ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.
13
ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’
14
ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 8 →
All chapters:
1
2
3
4
5
6
7
8
9
10
11
12
13
14