bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Nehemiah 10
Nehemiah 10
Kannada (ERV) 1997 (ಪರಿಶುದ್ದ ಬೈಬಲ್)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 11 →
1
ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.
2
ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,
3
ಪಷ್ಹೂರ್, ಅಮರ್ಯ, ಮಲ್ಕೀಯ,
4
ಹಟ್ಟೂಷ್, ಶೆಬನ್ಯ, ಮಲ್ಲೂಕ್,
5
ಹಾರೀಮ್, ಮೆರೇಮೋತ್, ಓಬದ್ಯ,
6
ದಾನಿಯೇಲ್, ಗಿನ್ನೆತೋನ್, ಬಾರೂಕ್,
7
ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8
ಮಾಜ್ಯ, ಬಿಲ್ಲೈ ಮತ್ತು ಶೆಮಾಯ ಈ ಎಲ್ಲಾ ಯಾಜಕರು ಮುದ್ರೆಹಾಕಿ ಒಡಂಬಡಿಕೆಯಲ್ಲಿ ಹೆಸರು ಬರೆಸಿದವರು.
9
ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ನ ಸಂತತಿಯವನಾದ ಬಿನ್ನೂಯ್,
10
ಕದ್ಮೀಯೇಲ್ ಮತ್ತು ಅವನ ಸಹೋದರರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ ಮತ್ತು ಹಾನಾನ್;
11
ಮೀಕ, ರೆಹೋಬ್, ಹಷಬ್ಯ ಜಕ್ಕೂರ್, ಶೇರೇಬ್ಯ, ಶೆಬನ್ಯ, (Verses 11-12)
12
See verse 11
13
ಹೋದೀಯ, ಬಾನೀ ಮತ್ತು ಬೆನೀನೂ.
14
ಒಡಂಬಡಿಕೆಗೆ ಸಹಿ ಹಾಕಿದ ನಾಯಕರುಗಳು: ಪರೋಷ್, ಪಹತ್ಮೋವಾಬ್, ಏಲಾಮ್, ಜತ್ತೂ, ಬಾನೀ,
15
ಬುನ್ನೀ, ಅಜ್ಗಾದ್, ಬೇಬೈ,
16
ಅದೋನೀಯ, ಬಿಗ್ವೈ, ಆದೀನ್,
17
ಆಟೇರ್, ಹಿಜ್ಕೀಯ, ಆಜ್ಜೂರ್,
18
ಹೋದೀಯ, ಹಾಷುಮ್, ಬೇಚೈ,
19
ಹಾರೀಫ್, ಅನಾತೋತ್, ನೇಬೈ,
20
ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
21
ಮೆಷೇಜಬೇಲ್, ಚಾದೋಕ್, ಯದ್ದೂವ,
22
ಪೆಲಟ್ಯ, ಹಾನಾನ್, ಅನಾಯ,
23
ಹೋಷೇಯ, ಹನನ್ಯ, ಹಷ್ಷೂಬ್,
24
ಹಲೋಹೇಷ, ಪಿಲ್ಹ, ಶೋಬೇಕ್,
25
ರೆಹೂಮ್, ಹಷಬ್ನ, ಮಾಸೇಯ,
26
ಅಹೀಯ, ಹಾನಾನ್, ಅನಾನ್,
27
ಮಲ್ಲೂಕ್, ಹಾರಿಮ್ ಮತ್ತು ಬಾನ.
28
ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು. (Verses 28-29)
29
See verse 28
30
“ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.
31
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.
32
“ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು.
33
ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
34
“ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!
35
“ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.
36
“ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.
37
“ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.
38
ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.
39
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 11 →
All chapters:
1
2
3
4
5
6
7
8
9
10
11
12
13