bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Proverbs 27
Proverbs 27
Kannada (ERV) 1997 (ಪರಿಶುದ್ದ ಬೈಬಲ್)
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 28 →
1
ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.
2
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.
3
ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.
4
ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.
5
ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.
6
ಸ್ನೇಹಿತನಿಂದಾಗುವ ಗಾಯಗಳು ಸಹಾಯಕರ. ಶತ್ರುವಿನ ಮುತ್ತುಗಳಾದರೋ ಮೋಸಕರ.
7
ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು;ವೇ ಇಲ್ಲ.ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ
8
ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.
9
ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.
10
ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.
11
ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ.
12
ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟು ಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.
13
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ.
14
ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.
15
ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.
16
ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ.
17
ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.
18
ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.
19
ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು.
20
ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.
21
ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.
22
ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.
23
ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.
24
ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.
25
ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.
26
ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.
27
ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 28 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31