bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Revelation 16
Revelation 16
Kannada (ERV) 1997 (ಪರಿಶುದ್ದ ಬೈಬಲ್)
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
1
ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.
2
ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.
3
ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು.
4
ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.
5
ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು:
6
ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು.
7
ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು:
8
ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಜನರನ್ನು ಕಡುಬಿಸಿಲಿನಿಂದ ಕಂದಿಸುವ ಅಧಿಕಾರವನ್ನು ಸೂರ್ಯನಿಗೆ ಕೊಡಲಾಯಿತು.
9
ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.
10
ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.
11
ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
12
ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.
13
ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.
14
ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.
15
“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”
16
ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.
17
ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
18
ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.
19
ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.
20
ಸಕಲ ದ್ವೀಪಗಳೂ ಅದೃಶ್ಯವಾದವು ಮತ್ತು ಬೆಟ್ಟಗಳೇ ಇಲ್ಲವಾದವು.
21
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪ ದ್ರವವು ಬಹಳ ಭೀಕರವಾಗಿತ್ತು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
Recommended Reading
Commentary
Revelation Commentaries
→
Devotional
Revelation Devotional Guide
→
Get This Bible
ERV Study Bible
→